24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya
error: Content is protected !!