September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya
error: Content is protected !!