23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

ಬೆಳ್ತಂಗಡಿ: “ನೈರ್ಮಲ್ಯದೆಡೆಗೆ ನಮ್ಮ ನಡಿಗೆ” ಎಂಬುವುದು ಜಾಗತಿಕ ವೇದವಾಕ್ಯ. ಮನುಷ್ಯನ ಉದರ ತುಂಬಿಸುವುದು ಎಷ್ಟು ಮುಖ್ಯವೋ ದೈಹಿಕ ಭಾದೆಯ ವಿಲೇವಾರಿಯೂ ಅಷ್ಟೇ ಮುಖ್ಯ. ಶೌಚಾಲಯಗಳು ನೈರ್ಮಲ್ಯ ಪರಿಸರದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.


ಶೌಚದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದಾಗ ಆರೋಗ್ಯಕರ ಪರಿಸರ ನಿರ್ಮಾಣ ಸಾಧ್ಯ. ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳಿಗೆ ಸುಂದರವಾದ ಶೌಚಾಲಯ ಲಭ್ಯಗೊಳಿಸಬೇಕಾದುದು ನಮ್ಮ ಆದ್ಯ ಕರ್ತವ್ಯವೂ ಹೌದು.


ಮಾದರಿ ಶೌಚಾಲಯ:
ಶಾಲೆಗಳು ವಿದ್ಯಾರ್ಥಿಗಳಿಗೆ ಬದುಕಿನ ಪಾಠ ನೀಡುವ ಮಂದಿರಗಳು ಎಂಬ ಮಾತಿನಲ್ಲಿ ಸಂಶಯವಿಲ್ಲ. ಸ್ವಚ್ಛತೆಯ ಶಿಕ್ಷಣ ಶಾಲೆಯಲ್ಲಿ ಗಟ್ಟಿಗೊಂಡಾಗ ಅದು ವ್ಯಕ್ತಿಯ ಬದುಕಿನ ಅವಿಭಾಜ್ಯ ಚಟುವಟಿಕೆಯಾಗಿ ರೂಪುಗೊಳ್ಳುತ್ತದೆ. ಆದ್ದರಿಂದಲೇ ಪ್ರತಿಯೊಂದು ಶಾಲೆಯೂ ಉತ್ತಮ ಶೌಚಾಲಯದ ನಿರ್ಮಾಣಕ್ಕೆ ಆದ್ಯತೆ ನೀಡಬೇಕಿದೆ. ಈ ನಿಟ್ಟಿನಲ್ಲಿ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕ ಮಹತ್ವದ ಹೆಜ್ಜೆ ಇಟ್ಟಿದೆ ಎಂದರೆ ತಪ್ಪಾಗದು. ಸರಕಾರಿ ಶಾಲೆಯೊಂದು ರಾಜ್ಯ ಹಾಗೂ ರಾಷ್ಟ್ರಕ್ಕೇ ಮಾದರಿಯಾದ ಶೌಚಾಲಯವನ್ನು ನಿರ್ಮಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.


ರೋಟರಿ ಕ್ಲಬ್ ಸಹಯೋಗ:
“ಕ್ಯಾನ್ ಫಿನ್ ಹೋಂಮ್ಸ್” ಎಂಬ ಖಾಸಗಿ ಸಂಸ್ಥೆಯು ತನ್ನ ಸಾಮಾಜಿಕ ಹೊಣೆಗಾರಿಕೆಯ ಅಂಗವಾಗಿ ಶೌಚಾಲಯ ನಿರ್ಮಾಣಕ್ಕೆ ಬದ್ಧತೆ ತೋರಿದಾಗ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದತ್ತ ಅವರಿಗೆ ದಾರಿ ತೋರಿಸಿದ್ದು ರೋಟರಿ ಸಂಸ್ಥೆ. ನೂರಾರು ಸಮಾಜಮುಖಿ ಕಾರ್ಯಗಳನ್ನು ನಿಸ್ವಾರ್ಥತೆಯಿಂದ ನಡೆಸಿಕೊಂಡು ಬರುತ್ತಿರುವ ರೋಟರಿ ಸಂಸ್ಥೆಗಳ ಸೇವೆ ಶ್ಲಾಘನೀಯ. ರೋಟರಿ ಇಂದಿರಾ ನಗರ ಬೆಂಗಳೂರು ಹಾಗೂ ರೋಟರಿ ಬೆಳ್ತಂಗಡಿ ಇವರ ಸಹಯೋಗದಲ್ಲಿ ಇಂದು ಅದ್ಭುತವಾದ ಶೌಚಾಲಯ ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ಎದ್ದು ನಿಂತಿದೆ.


ಶೌಚಾಲಯದಲ್ಲಿ ವಿನೂತನ ಕಲ್ಪನೆ:
ಶೌಚಾಲಯದ ಮುಂಭಾಗ ಹುಲ್ಲು ಹಾಸಿದ್ದು ವಿಶೇಷವಾದ ಕಲ್ಪನೆಯಾಗಿದೆ. ಕುಂಡಗಳಲ್ಲಿ ಗಿಡಗಳನ್ನಿಟ್ಟು ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಗೋಡೆಯ ಬಣ್ಣ ತುಂಬಾನೇ ಆಕರ್ಷಕವಾಗಿದೆ. ಕಡು ಕೆಂಬಣ್ಣ ಬಹಳ ಸುಂದರವಾಗಿ ಗೋಚರಿಸುತ್ತಿದೆ. ಇನ್ನು ಒಳಭಾಗ ಇನ್ನೂ ಅಚ್ಚರಿಯನ್ನು ಮೂಡಿಸುತ್ತದೆ. ಗೋಡೆಯ ತುಂಬೆಲ್ಲಾ ಘೋಷಣೆಗಳುಳ್ಳ ಪೋಸ್ಟರ್‌ಗಳ ಪ್ರದರ್ಶನ ಮಾಡಿರುವುದು ಒಂದು ವಿನೂತನ ಕಲ್ಪನೆಯಾಗಿದೆ. ಅದರಲ್ಲೂ ಪೋಸ್ಟರ್‌ಗಳಲ್ಲಿ ಶಾಲೆಯ ವಿದ್ಯಾರ್ಥಿಗಳನ್ನೇ ಬಳಸಿರುವುದು ಪೋಷಕರಲ್ಲಿ ಸಂತಸ ಮೂಡಿಸಿದೆ. ಹತ್ತು ಕಂಪಾರ್ಟ್ಮೆಂಟ್ ಹೊಂದಿರುವ ಈ ಶೌಚಾಲಯದ ಬಾಗಿಲುಗಳು ಮನಮೋಹಕ ಚಿತ್ರಗಳಿಂದ ಆಕರ್ಷಕ ವಾಗಿ ಕಾಣಿಸುತ್ತಿದೆ. ಪ್ರತಿಯೊಂದು ಕಂಪಾರ್ಟ್ಮೆಂಟ್‌ಗೂ ಸಂಖ್ಯೆಗಳನ್ನು ಕೊಡಲಾಗಿದೆ. ವಿಶಾಲವಾದ ಸ್ಥಳವಕಾಶವನ್ನು ಮಧ್ಯ ಭಾಗದಲ್ಲಿ ಕಲ್ಪಿಸಿದ್ದು ವಿಶೇಷವಾಗಿದೆ. ಬೃಹತ್ ಕನ್ನಡಿಯನ್ನು ಜೋಡಿಸಲಾಗಿದ್ದು ವಿದ್ಯಾರ್ಥಿಗಳ ಮನಸ್ಸನ್ನು ಸೂರೆಗೊ ಳ್ಳುತ್ತಿದೆ. ಶೌಚಾಲಯ ನಿರ್ವಹಣೆಗೆ ಬೇಕಿರುವ ಎಲ್ಲಾ ಪರಿಕರಗಳು ಲಭ್ಯವಿರುವಂತೆ ಮಾಡಲಾಗಿದೆ.

ಪ್ರತಿಯೊಬ್ಬರೂ ನೋಡಲೇಬೇಕಾದ ಮಟ್ಟಿಗೆ ಈ ಶೌಚಾಲಯ ನಿರ್ಮಾಣಗೊಂಡಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಇವರು ಶಾಲೆಯ ಮುಖ್ಯ ಶಿಕ್ಷಕ ಹುದ್ದೆ ಸ್ವೀಕರಿಸಿ ತನ್ನ ಮೊದಲ ಆದ್ಯತೆ ಶೌಚಾಲಯ ನಿರ್ಮಾಣಕ್ಕೆ ನೀಡಿರುವುದು ಎಲ್ಲರ ಪ್ರಸಂಶೆಗೆ ಪಾತ್ರವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಶೌಚಾಲಯ ಅಧಿಕೃತ ಉದ್ಘಾಟನೆ ಕಾಣಲಿದೆ.

Related posts

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2023

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!