26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತರಾದ ಬಸವರಾಜ್ ಶಂಕರ್ ಉಮ್ರಾಣಿ ಇವರು ಡಿ17,ರಂದು ಗ್ರಾಮೀಣ ಶಾಲೆಯಾದ ಸರಕಾರಿ ಪ್ರೌಢಶಾಲೆ ಬಂಗಾಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ನಾವು ಕಷ್ಟಕರ ಎಂದು ಭಾವಿಸುವ ಗಣಿತ ವಿಷಯವನ್ನು ಸುಲಭವಾಗಿ ಇಷ್ಟಪಟ್ಟು ಕಲಿಯುವ ಹಾಗೆ ಪ್ರೇರಣೆ ನೀಡಿದರು.

ಹುಟ್ಟು ಕುರುಡರಾಗಿರುವ ಇವರು ಒಂಭತ್ತು ಅಂಕಿಗಳಿರುವ ಸಂಖ್ಯೆಗಳ ಸಂಕಲನ ಮತ್ತು ವ್ಯವಕಲನವನ್ನು ಕ್ಷಣಾರ್ಧದಲ್ಲಿ ಯಾವುದೇ ತಂತ್ರಂಶಾಗಳ ಸಹಾಯವಿಲ್ಲದೇ ಮಾನಸಿಕ ಸಾಮರ್ಥ್ಯದಿಂದ ಬಿಡಿಸಿ ಉತ್ತರಿಸಿದ ರೀತಿ ಮಕ್ಕಳನ್ನು ಬೆರಗುಗೊಳಿಸಿತ್ತು. ಜನ್ಮ ದಿನಾಂಕ ಕೇಳಿಸಿಕೊಂಡು ಹುಟ್ಟಿದ ವಾರ ಹೇಳುವ ರೀತಿ ಅವಿಸ್ಮರಣೀಯ. ಎರಡಂಕ್ಕಿ ಮತ್ತು ಮೂರಂಕಿಗಳ ಗುಣಾಕಾರ ಕೋಷ್ಠಕವನ್ನು ಸರಾಗವಾಗಿ ಮೇಲಿಂದ ಕೆಳಗೆ ಮತ್ತು ಕೆಳಗಿಂದ ಮೇಲೆ ಹೇಳುವ ಸಾಮರ್ಥ್ಯ ಎಲ್ಲರನ್ನು ಮೋಡಿ ಮಾಡಿತ್ತು. ಶಾಲಾ ಶಿಕ್ಷಕರಲ್ಲಿ ಮೂವತ್ತು ಅಂಕಿಗಳನ್ನು ಕರಿಹಲಗೆಯ ಮೇಲೆ ಬರೆಯಿಸಿ ಆ ಅಂಕಿಗಳನ್ನು ಆಲಿಸಿ ತಮ್ಮ ಸ್ಮರಣಶಕ್ತಿಯಿಂದ ಕ್ರಮಬದ್ಧ ರೀತಿಯಲ್ಲಿ ಪ್ರಥಮ ಅಂಕಿಯಿಂದ ಮೂವತ್ತನೇ ಅಂಕಿಯವರೆಗೆ ಮತ್ತು ಮೂವತ್ತನೇ ಅಂಕಿಯಿಂದ ಪ್ರಥಮ ಅಂಕಿಯವರೆಗೆ ತಿರುಗ ಮುರುಗ ಹೇಳಿದ ರೀತಿ ಕೇಳಿಸಿಕೊಂಡ ಎಲ್ಲರೂ ಆಶ್ಚರ್ಯಚಕಿತರಾದರು.

ಮೂರಂಕಿ ಸಂಖ್ಯೆಗಳ ಘನಗಳನ್ನು ಮತ್ತು ವರ್ಗ ಸಂಖ್ಯೆಗಳನ್ನು ಯಾವುದೇ ತಂತ್ರಾಂಶಗಳ ಸಹಾಯವಿಲ್ಲದೆ ಕ್ಷಣಾ ಗಳಿಗೆಯಲ್ಲಿ ಹೇಳುತ್ತಿದ್ದ ಸಾಮರ್ಥ್ಯ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಮಾದರಿಯಂತಿತ್ತು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಉಮೇಶ್ ಪೂಜಾರಿ ಹಾಗೊ ಶ್ರೀಧರ ಗುಡಿಗಾರರ ಮುತುವರ್ಜಿಯಿಂದ ಕಾರ್ಯಕ್ರಮವು ಜರುಗಿತು.

ಶಾಲಾ ಮುಖ್ಯೋಪಾಧ್ಯಾಯರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya
error: Content is protected !!