September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಡಿ.17 ರಂದು ನಡೆಸಲಾಯಿತು.

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕರು (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು ಹಾಗೂ ಶಿಬಿರವನ್ನು ಇನ್ನಷ್ಟು ಅರ್ಥಪೂರ್ಣವಾಗಿ ನಡೆಸಿಕೊಳ್ಳಲು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈಧ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ವ ದಾದಿಯರ ದಿನಾಚರಣೆ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!