March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
error: Content is protected !!