38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya
error: Content is protected !!