July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ತಣ್ಣೀರುಪoತ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಓರ್ವ ಮೃತ್ಯು

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya
error: Content is protected !!