23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ 12 ವಿದ್ಯಾರ್ಥಿಗಳಿಗೆ 99 ಪರ್ಸೆಂಟೇಲ್

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಶ್ರೇಯಸ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!