23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!