24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: “ನಿತ್ಯವೂ ಅಂಬೇಡ್ಕರ್ ಅವರ ಹೆಸರನ್ನು ಜಪಿಸುವುದು ವ್ಯಸನ” ಎಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರ ಬಗ್ಗೆ ಗೃಹ ಸಚಿವರಿಗಿರುವ ದ್ವೇಷವನ್ನು ಹೊರಹಾಕಿದ್ದಾರೆ. ಸಂವಿಧಾನ ರಚನೆಯೂ ಸೇರಿದಂತೆ ಇಡೀ ಭಾರತ ದೇಶದ ಶೋಷಿತರ ಧ್ವನಿಯಾಗಿರುವ ಬಾಬಾ ಸಾಹೇಬರನ್ನ ಅವಮಾನಿಸಿವುದು ಈ ನೆಲಕ್ಕೆ ಬಗೆದ ದ್ರೋಹ.

ಬಹು ಸಂಖ್ಯಾತ ದಲಿತ, ಆದಿವಾಸಿ, ಹಿಂದುಳಿದ ವರ್ಗದ ಜನರು ಸ್ವಾಭಿಮಾನ, ಘನತೆ ಹಾಗೂ‌ ಗರ್ವದಿಂದ ಬದುಕಲು ಬಾಬಾ ಸಾಹೇಬರು ನೀಡಿದ ಹಕ್ಕುಗಳ ಕಾರಣಕ್ಕಾಗಿ ನಿತ್ಯವೂ ಅವರ ಜಪ ಮಾಡುವುದರಲ್ಲಿ ತಪ್ಪೇನಿದೆ? ಸಾವಿರಾರು ವರ್ಷಗಳಿಂದ ಶೋಷಣೆ ಅನುಭವಿಸಿದ ಜನರು ಸ್ವಾಭಿಮಾನದಿಂದ ಬಾಬಾ ಸಾಹೇಬರ ಹೆಸರು ಜಪಿಸುವುದು ತಪ್ಪೇ? ಗೃಹ ಸಚಿವ ಅಮಿತಾ ಶಾ ಅವರಲ್ಲಿ ಯಾಕಿಷ್ಟು ಬಾಬಾ ಸಾಹೇಬರ ಬಗ್ಗೆ ತಾತ್ಸಾರ ಎಂದು ದೇಶದ ಜನರೆದುರು ಸತ್ಯ ಹೇಳಲಿ.

ಬಿಜೆಪಿ ಪಕ್ಷ ನಿತ್ಯವೂ ಬಾಬಾ ಸಾಹೇಬರನ್ನು ಹಾಗೂ ಅವರ ಚಿಂತನೆಯನ್ನು ಅವಮಾನಿಸುತ್ತಾ, ಅಪಮಾನಿಸುತ್ತಾ ಅವರು ನೀಡಿದ ಸಂವಿಧಾನದ ಬಗ್ಗೆ ದ್ವೇಷ ಕಾರುತ್ತಲೇ ಬರುತ್ತಿರುವದಕ್ಕೆ ಇತಿಹಾಸವೇ ಸಾಕ್ಷಿ.
ತಮ್ಮ ಹುದ್ದೆಯ ಘನತೆಗೆ ಅಗೌರವವಾಗಿ ನಡೆದುಕೊಳ್ಳುವುದು ಸಾರ್ವಜನಿಕ ರಾಜಕೀಯ ಜೀವನದಲ್ಲಿ ಮುಂದುವರೆಯಲು ಅರ್ಹರಲ್ಲ. ಕೂಡಲೇ ಗೃಹ ಸಚಿವ ಈ ದೇಶದ ಎದುರು ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

Related posts

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸೌತಡ್ಕ ದೇವಾಲಯಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಭಕ್ತಾದಿಗಳ ನಂಬಿಕೆಗೆ ವಿರುದ್ಧವಾಗಿ ನಡೆಸಿರುವ ಅವ್ಯವಹಾರದ ಕುರಿತು ಪ್ರಶಾಂತ್ ಪೂವಾಜೆ ಯವರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!