23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: “ನಿತ್ಯವೂ ಅಂಬೇಡ್ಕರ್ ಅವರ ಹೆಸರನ್ನು ಜಪಿಸುವುದು ವ್ಯಸನ” ಎಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರ ಬಗ್ಗೆ ಗೃಹ ಸಚಿವರಿಗಿರುವ ದ್ವೇಷವನ್ನು ಹೊರಹಾಕಿದ್ದಾರೆ. ಸಂವಿಧಾನ ರಚನೆಯೂ ಸೇರಿದಂತೆ ಇಡೀ ಭಾರತ ದೇಶದ ಶೋಷಿತರ ಧ್ವನಿಯಾಗಿರುವ ಬಾಬಾ ಸಾಹೇಬರನ್ನ ಅವಮಾನಿಸಿವುದು ಈ ನೆಲಕ್ಕೆ ಬಗೆದ ದ್ರೋಹ.

ಬಹು ಸಂಖ್ಯಾತ ದಲಿತ, ಆದಿವಾಸಿ, ಹಿಂದುಳಿದ ವರ್ಗದ ಜನರು ಸ್ವಾಭಿಮಾನ, ಘನತೆ ಹಾಗೂ‌ ಗರ್ವದಿಂದ ಬದುಕಲು ಬಾಬಾ ಸಾಹೇಬರು ನೀಡಿದ ಹಕ್ಕುಗಳ ಕಾರಣಕ್ಕಾಗಿ ನಿತ್ಯವೂ ಅವರ ಜಪ ಮಾಡುವುದರಲ್ಲಿ ತಪ್ಪೇನಿದೆ? ಸಾವಿರಾರು ವರ್ಷಗಳಿಂದ ಶೋಷಣೆ ಅನುಭವಿಸಿದ ಜನರು ಸ್ವಾಭಿಮಾನದಿಂದ ಬಾಬಾ ಸಾಹೇಬರ ಹೆಸರು ಜಪಿಸುವುದು ತಪ್ಪೇ? ಗೃಹ ಸಚಿವ ಅಮಿತಾ ಶಾ ಅವರಲ್ಲಿ ಯಾಕಿಷ್ಟು ಬಾಬಾ ಸಾಹೇಬರ ಬಗ್ಗೆ ತಾತ್ಸಾರ ಎಂದು ದೇಶದ ಜನರೆದುರು ಸತ್ಯ ಹೇಳಲಿ.

ಬಿಜೆಪಿ ಪಕ್ಷ ನಿತ್ಯವೂ ಬಾಬಾ ಸಾಹೇಬರನ್ನು ಹಾಗೂ ಅವರ ಚಿಂತನೆಯನ್ನು ಅವಮಾನಿಸುತ್ತಾ, ಅಪಮಾನಿಸುತ್ತಾ ಅವರು ನೀಡಿದ ಸಂವಿಧಾನದ ಬಗ್ಗೆ ದ್ವೇಷ ಕಾರುತ್ತಲೇ ಬರುತ್ತಿರುವದಕ್ಕೆ ಇತಿಹಾಸವೇ ಸಾಕ್ಷಿ.
ತಮ್ಮ ಹುದ್ದೆಯ ಘನತೆಗೆ ಅಗೌರವವಾಗಿ ನಡೆದುಕೊಳ್ಳುವುದು ಸಾರ್ವಜನಿಕ ರಾಜಕೀಯ ಜೀವನದಲ್ಲಿ ಮುಂದುವರೆಯಲು ಅರ್ಹರಲ್ಲ. ಕೂಡಲೇ ಗೃಹ ಸಚಿವ ಈ ದೇಶದ ಎದುರು ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

Related posts

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸ್ತ್ರೀಶಕ್ತಿ ಗೊಂಚಲಿನ ಸಭೆ

Suddi Udaya
error: Content is protected !!