22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: “ನಿತ್ಯವೂ ಅಂಬೇಡ್ಕರ್ ಅವರ ಹೆಸರನ್ನು ಜಪಿಸುವುದು ವ್ಯಸನ” ಎಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರ ಬಗ್ಗೆ ಗೃಹ ಸಚಿವರಿಗಿರುವ ದ್ವೇಷವನ್ನು ಹೊರಹಾಕಿದ್ದಾರೆ. ಸಂವಿಧಾನ ರಚನೆಯೂ ಸೇರಿದಂತೆ ಇಡೀ ಭಾರತ ದೇಶದ ಶೋಷಿತರ ಧ್ವನಿಯಾಗಿರುವ ಬಾಬಾ ಸಾಹೇಬರನ್ನ ಅವಮಾನಿಸಿವುದು ಈ ನೆಲಕ್ಕೆ ಬಗೆದ ದ್ರೋಹ.

ಬಹು ಸಂಖ್ಯಾತ ದಲಿತ, ಆದಿವಾಸಿ, ಹಿಂದುಳಿದ ವರ್ಗದ ಜನರು ಸ್ವಾಭಿಮಾನ, ಘನತೆ ಹಾಗೂ‌ ಗರ್ವದಿಂದ ಬದುಕಲು ಬಾಬಾ ಸಾಹೇಬರು ನೀಡಿದ ಹಕ್ಕುಗಳ ಕಾರಣಕ್ಕಾಗಿ ನಿತ್ಯವೂ ಅವರ ಜಪ ಮಾಡುವುದರಲ್ಲಿ ತಪ್ಪೇನಿದೆ? ಸಾವಿರಾರು ವರ್ಷಗಳಿಂದ ಶೋಷಣೆ ಅನುಭವಿಸಿದ ಜನರು ಸ್ವಾಭಿಮಾನದಿಂದ ಬಾಬಾ ಸಾಹೇಬರ ಹೆಸರು ಜಪಿಸುವುದು ತಪ್ಪೇ? ಗೃಹ ಸಚಿವ ಅಮಿತಾ ಶಾ ಅವರಲ್ಲಿ ಯಾಕಿಷ್ಟು ಬಾಬಾ ಸಾಹೇಬರ ಬಗ್ಗೆ ತಾತ್ಸಾರ ಎಂದು ದೇಶದ ಜನರೆದುರು ಸತ್ಯ ಹೇಳಲಿ.

ಬಿಜೆಪಿ ಪಕ್ಷ ನಿತ್ಯವೂ ಬಾಬಾ ಸಾಹೇಬರನ್ನು ಹಾಗೂ ಅವರ ಚಿಂತನೆಯನ್ನು ಅವಮಾನಿಸುತ್ತಾ, ಅಪಮಾನಿಸುತ್ತಾ ಅವರು ನೀಡಿದ ಸಂವಿಧಾನದ ಬಗ್ಗೆ ದ್ವೇಷ ಕಾರುತ್ತಲೇ ಬರುತ್ತಿರುವದಕ್ಕೆ ಇತಿಹಾಸವೇ ಸಾಕ್ಷಿ.
ತಮ್ಮ ಹುದ್ದೆಯ ಘನತೆಗೆ ಅಗೌರವವಾಗಿ ನಡೆದುಕೊಳ್ಳುವುದು ಸಾರ್ವಜನಿಕ ರಾಜಕೀಯ ಜೀವನದಲ್ಲಿ ಮುಂದುವರೆಯಲು ಅರ್ಹರಲ್ಲ. ಕೂಡಲೇ ಗೃಹ ಸಚಿವ ಈ ದೇಶದ ಎದುರು ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

Related posts

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!