32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!