23.2 C
ಪುತ್ತೂರು, ಬೆಳ್ತಂಗಡಿ
March 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!