September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!