July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು ರಸ್ತೆ ಬದಿಯಲ್ಲಿ ಉದ್ದಕ್ಕೆ ನಿಂತುಕೊಂಡು ಬೈಕ್ ಹಾಗೂ ಇತರ ವಾಹನಗಳಿಗೆ ಕೈ ತೋರಿಸಿ ಹತ್ತಿಕೊಂಡು ಹೋಗುವುದು ಇತ್ತೀಚಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.


ಶಾಲೆ ಬಿಟ್ಟ ಕೂಡಲೇ ರಸ್ತೆ ಬದಿಯಲ್ಲಿ ನಿಂತು ಬೈಕ್ ಹಾಗೂ ಇತರ ದ್ವಿಚಕ್ರವಾಹನದಲ್ಲಿ ಒಬ್ಬರೇ ಹೋಗುತ್ತಿದ್ದರೆ ಅದಕ್ಕೆ ಮಕ್ಕಳು ಕೈ ಹಿಡಿದು ಬರುವುದಾಗಿ ತಿಳಿಸುತ್ತಾರೆ. ಕೆಲವರು ಅವರನ್ನು ಕುಳ್ಳಿರಿಸಿಕೊಂಡು ಹೋಗುತ್ತಾರೆ. ಆದರೆ ಹೋಗುವಾಗ ಏನಾದರೂ ಅವಘಡ ಸಂಭವಿಸಿದರೆ ಇದಕ್ಕೆ ಜವಾಬ್ದಾರಿ ಯಾರು ಎಂಬ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ಶಾಲೆಯಿಂದ ಮನೆಗೆ ಸುರಕ್ಷಿತವಾಗಿ ಹೋಗುವ ಬಗ್ಗೆ ಶಾಲೆಯವರು ಹಾಗೂ ಮಕ್ಕಳ ಪೋಷಕರು ಸೂಕ್ತ ವ್ಯವಸ್ಥೆಗಳನ್ನು ಮಾಡುವಂತೆ ನಾಗರಿಕರು ಒತ್ತಾಯಿಸಿದ್ದಾರೆ.
ವರದಿ: ಹರ್ಷ ಬಳ್ಳಮಂಜ

Related posts

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
error: Content is protected !!