March 7, 2026
ನಿಧನ

ಶಿಶಿಲ: ಪ್ರಸಿದ್ಧ ನಾಟಿ ವೈದ್ಯ ಉಮೇಶ್ ಪಂಡಿತ್ ದೇನೋಡಿ ಅನಾರೋಗ್ಯದಿಂದ ನಿಧನ

ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ.

ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ ತಾಲ್ಲೂಕಿನ ಪಟ್ಟಣಗಳಲ್ಲಿ ವಾರವಾರ ಶಿಬಿರ ನಡೆಸಿ ಹಳ್ಳಿ ಮದ್ದಿನ ಮುಖಾಂತರ ಅನೇಕ ಜನರ ಖಾಯಿಲೆಗಳನ್ನು ಗುಣಪಡಿಸಿ, ಅನೇಕ ಅಭಿಮಾನಿಗಳನ್ನು ಹೊಂದಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನಿಸಲ್ಪತ್ತಿರುತ್ತಾರೆ.

ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶಿಶಿಲ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇವರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಶ್ರೀಮತಿ ವಾರಿಜ ಬಟ್ಟೆಮಾರು,ನಾಳ ನಿಧನ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya
error: Content is protected !!