24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: “ನಿತ್ಯವೂ ಅಂಬೇಡ್ಕರ್ ಅವರ ಹೆಸರನ್ನು ಜಪಿಸುವುದು ವ್ಯಸನ” ಎಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರ ಬಗ್ಗೆ ಗೃಹ ಸಚಿವರಿಗಿರುವ ದ್ವೇಷವನ್ನು ಹೊರಹಾಕಿದ್ದಾರೆ. ಸಂವಿಧಾನ ರಚನೆಯೂ ಸೇರಿದಂತೆ ಇಡೀ ಭಾರತ ದೇಶದ ಶೋಷಿತರ ಧ್ವನಿಯಾಗಿರುವ ಬಾಬಾ ಸಾಹೇಬರನ್ನ ಅವಮಾನಿಸಿವುದು ಈ ನೆಲಕ್ಕೆ ಬಗೆದ ದ್ರೋಹ.

ಬಹು ಸಂಖ್ಯಾತ ದಲಿತ, ಆದಿವಾಸಿ, ಹಿಂದುಳಿದ ವರ್ಗದ ಜನರು ಸ್ವಾಭಿಮಾನ, ಘನತೆ ಹಾಗೂ‌ ಗರ್ವದಿಂದ ಬದುಕಲು ಬಾಬಾ ಸಾಹೇಬರು ನೀಡಿದ ಹಕ್ಕುಗಳ ಕಾರಣಕ್ಕಾಗಿ ನಿತ್ಯವೂ ಅವರ ಜಪ ಮಾಡುವುದರಲ್ಲಿ ತಪ್ಪೇನಿದೆ? ಸಾವಿರಾರು ವರ್ಷಗಳಿಂದ ಶೋಷಣೆ ಅನುಭವಿಸಿದ ಜನರು ಸ್ವಾಭಿಮಾನದಿಂದ ಬಾಬಾ ಸಾಹೇಬರ ಹೆಸರು ಜಪಿಸುವುದು ತಪ್ಪೇ? ಗೃಹ ಸಚಿವ ಅಮಿತಾ ಶಾ ಅವರಲ್ಲಿ ಯಾಕಿಷ್ಟು ಬಾಬಾ ಸಾಹೇಬರ ಬಗ್ಗೆ ತಾತ್ಸಾರ ಎಂದು ದೇಶದ ಜನರೆದುರು ಸತ್ಯ ಹೇಳಲಿ.

ಬಿಜೆಪಿ ಪಕ್ಷ ನಿತ್ಯವೂ ಬಾಬಾ ಸಾಹೇಬರನ್ನು ಹಾಗೂ ಅವರ ಚಿಂತನೆಯನ್ನು ಅವಮಾನಿಸುತ್ತಾ, ಅಪಮಾನಿಸುತ್ತಾ ಅವರು ನೀಡಿದ ಸಂವಿಧಾನದ ಬಗ್ಗೆ ದ್ವೇಷ ಕಾರುತ್ತಲೇ ಬರುತ್ತಿರುವದಕ್ಕೆ ಇತಿಹಾಸವೇ ಸಾಕ್ಷಿ.
ತಮ್ಮ ಹುದ್ದೆಯ ಘನತೆಗೆ ಅಗೌರವವಾಗಿ ನಡೆದುಕೊಳ್ಳುವುದು ಸಾರ್ವಜನಿಕ ರಾಜಕೀಯ ಜೀವನದಲ್ಲಿ ಮುಂದುವರೆಯಲು ಅರ್ಹರಲ್ಲ. ಕೂಡಲೇ ಗೃಹ ಸಚಿವ ಈ ದೇಶದ ಎದುರು ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

Related posts

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya
error: Content is protected !!