July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

ಬೆಳ್ತಂಗಡಿ: “ನಿತ್ಯವೂ ಅಂಬೇಡ್ಕರ್ ಅವರ ಹೆಸರನ್ನು ಜಪಿಸುವುದು ವ್ಯಸನ” ಎಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರ ಬಗ್ಗೆ ಗೃಹ ಸಚಿವರಿಗಿರುವ ದ್ವೇಷವನ್ನು ಹೊರಹಾಕಿದ್ದಾರೆ. ಸಂವಿಧಾನ ರಚನೆಯೂ ಸೇರಿದಂತೆ ಇಡೀ ಭಾರತ ದೇಶದ ಶೋಷಿತರ ಧ್ವನಿಯಾಗಿರುವ ಬಾಬಾ ಸಾಹೇಬರನ್ನ ಅವಮಾನಿಸಿವುದು ಈ ನೆಲಕ್ಕೆ ಬಗೆದ ದ್ರೋಹ.

ಬಹು ಸಂಖ್ಯಾತ ದಲಿತ, ಆದಿವಾಸಿ, ಹಿಂದುಳಿದ ವರ್ಗದ ಜನರು ಸ್ವಾಭಿಮಾನ, ಘನತೆ ಹಾಗೂ‌ ಗರ್ವದಿಂದ ಬದುಕಲು ಬಾಬಾ ಸಾಹೇಬರು ನೀಡಿದ ಹಕ್ಕುಗಳ ಕಾರಣಕ್ಕಾಗಿ ನಿತ್ಯವೂ ಅವರ ಜಪ ಮಾಡುವುದರಲ್ಲಿ ತಪ್ಪೇನಿದೆ? ಸಾವಿರಾರು ವರ್ಷಗಳಿಂದ ಶೋಷಣೆ ಅನುಭವಿಸಿದ ಜನರು ಸ್ವಾಭಿಮಾನದಿಂದ ಬಾಬಾ ಸಾಹೇಬರ ಹೆಸರು ಜಪಿಸುವುದು ತಪ್ಪೇ? ಗೃಹ ಸಚಿವ ಅಮಿತಾ ಶಾ ಅವರಲ್ಲಿ ಯಾಕಿಷ್ಟು ಬಾಬಾ ಸಾಹೇಬರ ಬಗ್ಗೆ ತಾತ್ಸಾರ ಎಂದು ದೇಶದ ಜನರೆದುರು ಸತ್ಯ ಹೇಳಲಿ.

ಬಿಜೆಪಿ ಪಕ್ಷ ನಿತ್ಯವೂ ಬಾಬಾ ಸಾಹೇಬರನ್ನು ಹಾಗೂ ಅವರ ಚಿಂತನೆಯನ್ನು ಅವಮಾನಿಸುತ್ತಾ, ಅಪಮಾನಿಸುತ್ತಾ ಅವರು ನೀಡಿದ ಸಂವಿಧಾನದ ಬಗ್ಗೆ ದ್ವೇಷ ಕಾರುತ್ತಲೇ ಬರುತ್ತಿರುವದಕ್ಕೆ ಇತಿಹಾಸವೇ ಸಾಕ್ಷಿ.
ತಮ್ಮ ಹುದ್ದೆಯ ಘನತೆಗೆ ಅಗೌರವವಾಗಿ ನಡೆದುಕೊಳ್ಳುವುದು ಸಾರ್ವಜನಿಕ ರಾಜಕೀಯ ಜೀವನದಲ್ಲಿ ಮುಂದುವರೆಯಲು ಅರ್ಹರಲ್ಲ. ಕೂಡಲೇ ಗೃಹ ಸಚಿವ ಈ ದೇಶದ ಎದುರು ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಾಂಡ್ ಫೇಸ್ಟ್ ಪ್ರಯುಕ್ತ ಆಯೋಜಿಸಿದ್ದ ಲಕ್ಕಿ ಕೂಪನ್ ಬಿಡುಗಡೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya
error: Content is protected !!