April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

ಬೆಳಾಲು : ದ ಕ ಜಿ ಪಂ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಬೆಳಾಲು ಇಲ್ಲಿ ಪ್ರತಿಭಾ ದಿನಾಚರಣೆಯನ್ನು ಡಿ.14ರಂದು ಆಚರಿಸಲಾಯಿತು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಇಲ್ಲಿನ ಧರ್ಮದರ್ಶಿ ಹರೀಶ್ ಗೌಡ ಇವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಸಂಚಾಲಕ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಇನ್ವರ್ಟರ್ ದಾನಿಗಳಾದ ಜಯಣ್ಣ ಗೌಡ ಮಿನಂದೇಲು, ಪ್ರಿಂಟರ್ ದಾನಿಗಳಾದ ನೀಲಯ್ಯ ಗೌಡ ಭೀಮಂಡೆ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಗೌಡ ಏಳ್ಳುಗದ್ದೆ, ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಟಿ ಬಿ ಬಸವಲಿಂಗಪ್ಪ, ಊರ ಹಿರಿಯರಾದ ಬಾಬು ಗೌಡ ಅಲಕೆದಡ್ಡ, ಡೊಂಬಯ್ಯ ಗೌಡ ಕಾವಟೆ, ಬಾಲಚಂದ್ರ ಹೊಳ್ಳ, ಲೋಕಯ್ಯ ಗೌಡ ಗುಂಡಿಹಿತ್ಲು, ಚಿತ್ತಾರ ಯುವ ಶಕ್ತಿ ಗೆಳೆಯರ ಬಳಗದ ಅಧ್ಯಕ್ಷ ಸುರೇಶ್ ಇರಂಬಿತ್ತಿಲು, ವಿವೇಕ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಅರಣೆಮಾರು, ಪ್ರತಿಭಾ ದಿನಾಚರಣೆ ಸಮಿತಿಯ ಅಧ್ಯಕ್ಷ ಸಂತೋಷ ಮಡಿವಾಳ, ಎಸ್.ಡಿ.ಎಮ್.ಸಿ ಅಧ್ಯಕ್ಷ ಪ್ರಸಾದ್ ಗೌಡ ಭಾಗವಹಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಾ ಸ್ವಾಗತಿಸಿ, ಜ್ಞಾನ ದೀಪ ಶಿಕ್ಷಕಿ ಕು I ದಿವ್ಯಶ್ರೀ ವರದಿ ವಾಚಿಸಿ, ಸಹಶಿಕ್ಷಕಿ ಶ್ರೀಮತಿ ಜಯಶ್ರೀ ಬಿ ಕೆ ವಂದಿಸಿದರು. ಅತಿಥಿಗಳನ್ನು ದಾನಿಗಳನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಕಲಿಕೆ, ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಹಶಿಕ್ಷಕಿ ಜಯಶ್ರೀ ಹಾಗೂ ಜ್ಞಾನ ದೀಪ ಶಿಕ್ಷಕಿ ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸ್ಥಳೀಯ ಅಂಗನವಾಡಿ ವಿದ್ಯಾರ್ಥಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈವಿಧ್ಯ ಮತ್ತು ಪೌರಾಣಿಕ ನಾಟಕ ಭಕ್ತ ಪ್ರಹ್ಲಾದ ಪ್ರದರ್ಶನಗೊಂಡಿತು.

Related posts

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ