23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ KA-18-C-5907 ಅಶೋಕ್ ಲೈಲ್ಯಾಂಡ್ ಕಂಪನಿಯ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಸುಮಾರು 9 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು.

ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು. ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಾಯಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya
error: Content is protected !!