25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ. 20 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕ ಮಾತನಾಡಿ ಮಾಧ್ಯಮ ಮಿತ್ರರು ಸಂಸ್ಥೆಯ ಕಾರ್ಯಕ್ರಮಕ್ಕೆ ನೀಡುವ ಸಹಕಾರಕ್ಕೆ ಸ್ಮರಿಸಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಇನ್ನೊರ್ವ ಮುಖ್ಯ ಅತಿಥಿ ಮೀಡಿಯಾ ಕ್ಲಬ್ ಅಧ್ಯಕ್ಷ ಬಾಲಕೃಷ್ಣರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೇಕ್ಕಾಟ್ಟೀಲ್ ಕ್ರಿಸ್ಮಸ್ ಕೇಕ್ ಕತ್ತರಿಸಿ, ಕ್ರಿಸ್ಮಸ್ ಹಬ್ಬದ ಸಂದೇಶ ನೀಡಿದರು.
ಹಾಜರಿದ್ದ ಪತ್ರಿಕೆ ಹಾಗೂ ಮೀಡಿಯಾ ಕ್ಲಬ್ಬಿನ ಸದಸ್ಯರಿಗೆ ಕಿರು ಕಾಣಿಕೆ ನೀಡಲಾಯಿತು. ಸಂಯೋಜಕಿ ಕು. ಶ್ರೇಯಾ ಪ್ರಾರ್ಥನೆ ಹಾಡಿದರು.
ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು.

Related posts

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya
error: Content is protected !!