September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ. 20 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕ ಮಾತನಾಡಿ ಮಾಧ್ಯಮ ಮಿತ್ರರು ಸಂಸ್ಥೆಯ ಕಾರ್ಯಕ್ರಮಕ್ಕೆ ನೀಡುವ ಸಹಕಾರಕ್ಕೆ ಸ್ಮರಿಸಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಇನ್ನೊರ್ವ ಮುಖ್ಯ ಅತಿಥಿ ಮೀಡಿಯಾ ಕ್ಲಬ್ ಅಧ್ಯಕ್ಷ ಬಾಲಕೃಷ್ಣರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೇಕ್ಕಾಟ್ಟೀಲ್ ಕ್ರಿಸ್ಮಸ್ ಕೇಕ್ ಕತ್ತರಿಸಿ, ಕ್ರಿಸ್ಮಸ್ ಹಬ್ಬದ ಸಂದೇಶ ನೀಡಿದರು.
ಹಾಜರಿದ್ದ ಪತ್ರಿಕೆ ಹಾಗೂ ಮೀಡಿಯಾ ಕ್ಲಬ್ಬಿನ ಸದಸ್ಯರಿಗೆ ಕಿರು ಕಾಣಿಕೆ ನೀಡಲಾಯಿತು. ಸಂಯೋಜಕಿ ಕು. ಶ್ರೇಯಾ ಪ್ರಾರ್ಥನೆ ಹಾಡಿದರು.
ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು.

Related posts

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಉಜಿರೆ ಎಸ್‌.ಡಿ.ಎಂ ಪಾಲಿಟೆಕ್ನಿಕ್‌ ನಲ್ಲಿ ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!