April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ KA-18-C-5907 ಅಶೋಕ್ ಲೈಲ್ಯಾಂಡ್ ಕಂಪನಿಯ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಸುಮಾರು 9 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು.

ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು. ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಾಯಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!