22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ KA-18-C-5907 ಅಶೋಕ್ ಲೈಲ್ಯಾಂಡ್ ಕಂಪನಿಯ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಸುಮಾರು 9 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು.

ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು. ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಾಯಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಕಲ್ಮಂಜ: ನಿಡಿಗಲ್ ಆದರ್ಶನಗರದ ನಿವಾಸಿ ಚಂದ್ರಶೇಖರ್ ಎಮ್. ನಿಧನ

Suddi Udaya

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
error: Content is protected !!