25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ KA-18-C-5907 ಅಶೋಕ್ ಲೈಲ್ಯಾಂಡ್ ಕಂಪನಿಯ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಸುಮಾರು 9 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು.

ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು. ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಾಯಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!