22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ. 20 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕ ಮಾತನಾಡಿ ಮಾಧ್ಯಮ ಮಿತ್ರರು ಸಂಸ್ಥೆಯ ಕಾರ್ಯಕ್ರಮಕ್ಕೆ ನೀಡುವ ಸಹಕಾರಕ್ಕೆ ಸ್ಮರಿಸಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಇನ್ನೊರ್ವ ಮುಖ್ಯ ಅತಿಥಿ ಮೀಡಿಯಾ ಕ್ಲಬ್ ಅಧ್ಯಕ್ಷ ಬಾಲಕೃಷ್ಣರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೇಕ್ಕಾಟ್ಟೀಲ್ ಕ್ರಿಸ್ಮಸ್ ಕೇಕ್ ಕತ್ತರಿಸಿ, ಕ್ರಿಸ್ಮಸ್ ಹಬ್ಬದ ಸಂದೇಶ ನೀಡಿದರು.
ಹಾಜರಿದ್ದ ಪತ್ರಿಕೆ ಹಾಗೂ ಮೀಡಿಯಾ ಕ್ಲಬ್ಬಿನ ಸದಸ್ಯರಿಗೆ ಕಿರು ಕಾಣಿಕೆ ನೀಡಲಾಯಿತು. ಸಂಯೋಜಕಿ ಕು. ಶ್ರೇಯಾ ಪ್ರಾರ್ಥನೆ ಹಾಡಿದರು.
ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು.

Related posts

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಬೆಳಾಲು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಅನಂತ ಚತುರ್ದಶಿ ನೋಂಪು ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ದೂರುದಾರ ಸಾಕ್ಷಿಯು ನೀಡಿರುವ ಅಸ್ಥಿಪಂಜರದ ಅವಶೇಷಗಳನ್ನು, ಪಂಚರ ಸಮ್ಮುಖದಲ್ಲಿ ಪೊಲೀಸರು ಸ್ವಾಧೀನಕ್ಕೆ ಪಡೆದುಕೊಂಡಿದ್ದಾರೆ: ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು: ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ.

Suddi Udaya

ಮೊಗ್ರು ಮುಗೇರಡ್ಕ ‘ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್’ ಬೆಳ್ಳಿಹಬ್ಬ ಪ್ರಯುಕ್ತ ‘ರಜತ ಪಥ’ ಕಾರ್ಯಕ್ರಮ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!