24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

ಬೆಳ್ತಂಗಡಿ : ದಿನಂಪ್ರತಿ ಮಂಗಳೂರು ಉದ್ಯೋಗಕ್ಕೆ ಹೋಗುವ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಅನಾನುಕೂಲವಾಗಿದ್ದು, ಇದನ್ನು ನಿವಾರಿಸಲು ಧರ್ಮಸ್ಥಳದಿಂದ ಬಿ.ಸಿ ರೋಡ್ ಮಂಗಳೂರು ಮಾತ್ರ ನಿಲುಗಡೆ ಇರುವ ವೇಗದೂತ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು ವರ್ಷಗಳಿಂದ ಇರುವ ಪ್ರಯಾಣಿಕರ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಬಸ್‌ ಸೌಲಭ್ಯ ಕಲ್ಪಿಸಿ ನೆರವಾಗಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಸಮಿತಿ ನಿಯೋಗ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಡಿ.18 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು.

ಮಂಗಳೂರು ವಿಭಾಗ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಭೇಟಿಯಾದ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನಿಯೋಗ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಿತು. ನಂತರ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಹಾಗೂ ಧರ್ಮಸ್ಥಳ ವಿಭಾಗ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಭೇಟಿಯಾಗಿ ಬಸ್ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ಮನದಟ್ಟು ಮಾಡಿ ಮನವಿ ಮಾಡಿಕೊಂಡರು.



ನಿಯೋಗದಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರಾದ ನವಾಝ್ ಕಟ್ಟೆ, ಹನೀಫ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಉಜಿರೆ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಆಲಿ, ಚಾರ್ಮಾಡಿ ಪಂಚಾಯತ್ ಸದಸ್ಯರಾದ ಸಿದ್ಧಿಕ್ ಯು.ಪಿ, ಕ್ಷೇತ್ರ ನಾಯಕರಾದ ಅಶ್ರಫ್ ಚಾರ್ಮಾಡಿ, ಸಹಲ್ ನಿರ್ಸಾಲ್, ಮರ್ಷದ್ ಉಜಿರೆ ಉಪಸ್ಥಿತರಿದ್ದರು. ಮಂಗಳೂರು ಧರ್ಮಸ್ಥಳ ಮಾರ್ಗದಲ್ಲಿ ಹೆಚ್ಚುವರಿ ವೇಗದೂತ ಬಸ್ ಹಾಗೂ ರಾಜಹಂಸ ಬಸ್ ಹಾಕಿ ಆದಷ್ಟು ಬೇಗ ಪ್ರಯಾಣಿಕರ ಬಸ್ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹನ್ನೆರಡನೇ ಸುತ್ತಿನಲ್ಲಿ 11360 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
error: Content is protected !!