September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಶ್ರೀ. ಧ ಮ.ಪ್ರೌಢಶಾಲೆ ಇಲ್ಲಿಯ ಶಾರೀರಿಕ ಶಿಕ್ಷಕ ಕೃಷ್ಣಾನಂದ ಬೆಳಾಲು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಮಕ್ಕಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಆಟೋಟ ಸ್ಪರ್ಧೆಗಳಲ್ಲಿಯೂ ಭಾಗವಹಿಸಬೇಕು. ಆಟದಲ್ಲಿ ಸೋಲು ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳುತ್ತಾ ಸ್ಪರ್ಧಿಗಳಿಗೆ ಶುಭ ಕೋರಿದರು.


ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕಮಲ್ ತೇಜು ರಜಪೂತ್ , ಯಕ್ಷಗಾನ ಗುರುಗಳಾದ ಲಕ್ಷಣ್ ಗೌಡ ಬೆಳಾಲು ಮತ್ತು ಶಿಕ್ಷಕವೃಂದದವರು ಉಪಸ್ಥಿತರಿದ್ದರು.


ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮವನ್ನು ದೈಹಿಕ ಶಿಕ್ಷಕ ಸಂಜೀವ ಕೆ ನಿರ್ವಹಿಸಿದರು.

Related posts

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಖ್ಯಾತ ಚಲನಚಿತ್ರ ನಿರ್ದೇಶಕ ವಿನು ಬಳಂಜ ಅವರ ತಾಯಿ ಮೀನಾಕ್ಷಿ ನಾಯ್ಗ ಅಟ್ಲಾಜೆ ನಿಧನ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya
error: Content is protected !!