25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ KA-18-C-5907 ಅಶೋಕ್ ಲೈಲ್ಯಾಂಡ್ ಕಂಪನಿಯ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಸುಮಾರು 9 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು.

ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು. ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಾಯಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಾಗೂ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya
error: Content is protected !!