30.6 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ. 20 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ. ರವರು ಪ್ರಾಸ್ತಾವಿಕ ಮಾತನಾಡಿ ಮಾಧ್ಯಮ ಮಿತ್ರರು ಸಂಸ್ಥೆಯ ಕಾರ್ಯಕ್ರಮಕ್ಕೆ ನೀಡುವ ಸಹಕಾರಕ್ಕೆ ಸ್ಮರಿಸಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಇನ್ನೊರ್ವ ಮುಖ್ಯ ಅತಿಥಿ ಮೀಡಿಯಾ ಕ್ಲಬ್ ಅಧ್ಯಕ್ಷ ಬಾಲಕೃಷ್ಣರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಧರ್ಮಪ್ರಾಂತ್ಯದ ಮೀಡಿಯಾ ಅಪೋಸ್ತಲೇಟ್ ನಿರ್ದೇಶಕರಾದ ವಂದನೀಯ ಫಾ. ಮ್ಯಾಥ್ಯೂ ತಾಯೇಕ್ಕಾಟ್ಟೀಲ್ ಕ್ರಿಸ್ಮಸ್ ಕೇಕ್ ಕತ್ತರಿಸಿ, ಕ್ರಿಸ್ಮಸ್ ಹಬ್ಬದ ಸಂದೇಶ ನೀಡಿದರು.
ಹಾಜರಿದ್ದ ಪತ್ರಿಕೆ ಹಾಗೂ ಮೀಡಿಯಾ ಕ್ಲಬ್ಬಿನ ಸದಸ್ಯರಿಗೆ ಕಿರು ಕಾಣಿಕೆ ನೀಡಲಾಯಿತು. ಸಂಯೋಜಕಿ ಕು. ಶ್ರೇಯಾ ಪ್ರಾರ್ಥನೆ ಹಾಡಿದರು.
ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೀಮತಿ ಜಿನಿ ಪಿ.ಜೆ. ಧನ್ಯವಾದವಿತ್ತರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!