September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

ಧರ್ಮಸ್ಥಳ : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಕಾಂಬೋಡಿಯದಿಂದ ಆಗಮಿಸಿದ ತಂಡದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರ ಉಜಿರೆ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದ ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಆರಂಭವಾಗಿ ಕಾಂಬೋಡಿಯಾದ ಅತಿಥಿಗಳು ದೀಪ ಪ್ರಜ್ಜಲನೆ ಮಾಡುವುದರ ಮುಖಾಂತರ ಮುಂದುವರಿಯಿತು. ಬಳಿಕ ಅವರು ತಮ್ಮ ದೇಶದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಅವರ ಸಂಸ್ಕೃತಿಯನ್ನು ವಿದ್ಯಾರ್ಥಿಗಳ ಮುಂದೆ ಅನಾವರಣಗೊಳಿಸಿದರು. ಶಾಲೆಯಲ್ಲಿನ ವಿವಿಧ ಚಟುವಟಿಕೆಗಳನ್ನು ಅವರು ವೀಕ್ಷಿಸಿ ಸಂಭ್ರಮಪಟ್ಟರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅತಿಥಿ ಅಭ್ಯಾಗತರನ್ನು ಪರಿಚಯಿಸಿ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದರು. ಶಾಲಾ ಸಹಶಿಕ್ಷಕಿ ಶ್ರೀಮತಿ ಆಶಾ ಕುಮಾರಿ ಪಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related posts

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಹಾಗೂ ಲಿಯೋ ಕ್ಲಬ್ ವತಿಯಿಂದ ಮಾದಕ ವಸ್ತುಗಳ ಜಾಗೃತಿ ಶಿಬಿರ

Suddi Udaya
error: Content is protected !!