32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya
error: Content is protected !!