22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಇದರ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya
error: Content is protected !!