25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಕಕ್ಕಿಂಜೆ: ರಮ್ಯ ಡ್ರೆಸ್ಸಸ್ ನಲ್ಲಿ ಶೇ. 10-30 ಡಿಸ್ಕೌಂಟ್ ಸೇಲ್

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya
error: Content is protected !!