ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya
error: Content is protected !!