25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!