25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ ಯೋಜನಾ ಕಚೇರಿಯಲ್ಲಿ ನೀರು ಉಳಿಸಿ ಭವಿಷ್ಯದ ನೀರು-ಇಂದಿನ ಕಾಳಜಿ ಕರಪತ್ರ ಬಿಡುಗಡೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಅನುಗ್ರಹ ಶಾಲಾ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!