26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್ ಬಳಿ ಡಿ.20 ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾಕರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ನಾಯಕರಾದ ನವಾಝ್ ಕಟ್ಟೆ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ.‌ ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆ ಯಿಂದ ಕೆಳಗೆ ಇಳಿಸಬೇಕು ಎಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಣಿಯೂರು ಬ್ಲಾಕ್ ಸಮಿತಿ ಅಧ್ಯಕ್ಷ ಮುಸ್ತಾಫ ಬಂಗೇರಕಟ್ಟೆ, ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಮುಖಂಡರಾದ ಹನೀಫ್ ಪುಂಜಾಲಕಟ್ಟೆ, ನಝೀರ್ ಬಜಾರು, ಹನೀಫ್ ಟಿ.ಎಸ್, ರೌಫ್ ಪುಂಜಾಲಕಟ್ಟೆ, ಅಶ್ರಫ್ ಬದ್ಯಾರು, ಬ್ಲಾಕ್ ಪದಾಧಿಕಾರಿಗಳು, ಬ್ರಾಂಚ್ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ನಿನ್ನಿಕಲ್ಲು ರಸ್ತೆ ಬಳಿ ಬೈಕ್ ಮತ್ತು ಪಿಕಪ್ ಅಪಘಾತ: ಬೈಕ್ ಸವಾರ ಗಂಭೀರ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
error: Content is protected !!