ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್ ಬಳಿ ಡಿ.20 ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾಕರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ನಾಯಕರಾದ ನವಾಝ್ ಕಟ್ಟೆ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ.‌ ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆ ಯಿಂದ ಕೆಳಗೆ ಇಳಿಸಬೇಕು ಎಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಣಿಯೂರು ಬ್ಲಾಕ್ ಸಮಿತಿ ಅಧ್ಯಕ್ಷ ಮುಸ್ತಾಫ ಬಂಗೇರಕಟ್ಟೆ, ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಮುಖಂಡರಾದ ಹನೀಫ್ ಪುಂಜಾಲಕಟ್ಟೆ, ನಝೀರ್ ಬಜಾರು, ಹನೀಫ್ ಟಿ.ಎಸ್, ರೌಫ್ ಪುಂಜಾಲಕಟ್ಟೆ, ಅಶ್ರಫ್ ಬದ್ಯಾರು, ಬ್ಲಾಕ್ ಪದಾಧಿಕಾರಿಗಳು, ಬ್ರಾಂಚ್ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಆರಂಭ ಆ.7 ರಿಂದ 16 ರವರೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಸಿಬ್ಬಂದಿ ಸ್ಪಂದನಾ ಎಮ್.ಎಸ್. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!