23.7 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜಕೀಯ

ಸರ್ವಾಧಿಕಾರಿ, ದ್ವೇಷದ ರಾಜಕಾರಣದ ಮೂಲಕ ಕೆಟ್ಟ ಪರಂಪರೆಗೆ ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ನಾಂದಿ ಹಾಡಿದೆ : ಅಧಿವೇಶನ ನಾಮ್ ಕೇ ವಾಸ್ತೆ ಪತ್ರಿಕಾಗೋಷ್ಠಿಯಲ್ಲಿ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ನಾಮ್ ಕೇ ವಾಸ್ತೆಯಾಗಿದೆ. ನಾನಾ ಕಾರಣಗಳಿಂದ ಅಧಿವೇಶನದಲ್ಲಿ ಮೂರು ದಿನ ನಷ್ಟವಾಗಿದ್ದು ಅಧಿವೇಶನ ಮುಂದುವರಿಸುವಂತೆ ಪ್ರತಿಪಕ್ಷಗಳ ಕೋರಿಕೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿಲ್ಲ” ಎಂದು ಎಂ ಎಲ್ ಸಿ ಪ್ರತಾಪಸಿಂಹ ನಾಯಕ್ ಹೇಳಿದರು.
ಅವರು ಶನಿವಾರ ಬೆಳ್ತಂಗಡಿಯ ಪ್ರವಾಸಿ ಬಂಗಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ
“ಬಹುಮತದ ಅಹಂಕಾರದಿಂದ ತಾವು ಮಾಡಿದ್ದು ನಡೆಯುತ್ತದೆ ಎಂಬ ನಡವಳಿಕೆಯುಳ್ಳ ಕಾಂಗ್ರೆಸ್, ಅಧಿವೇಶನದ ಪ್ರತಿ ಹಂತದಲ್ಲೂ ಗೊಂದಲ ನಡೆಸಿದೆ. ಸರ್ವಾಧಿಕಾರಿ, ದ್ವೇಷದ ರಾಜಕಾರಣದ ಮೂಲಕ ಕೆಟ್ಟ ಪರಂಪರೆಗೆ ನಾಂದಿ ಹಾಡಿದೆ.ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯೇ ನಡೆದಿಲ್ಲ. ಉತ್ತರ ಕೊಡಬೇಕಾದ ಸರಕಾರ ಅಶಾಂತಿಯ ವಾತಾವರಣವನ್ನು ನಿರ್ಮಾಣ ಮಾಡಿರುವುದು ವಿಪರ್ಯಾಸ” ಎಂದು ಹೇಳಿದರು

“ರಾಜ್ಯ ಸರಕಾರದಿಂದ ಅಭಿವೃದ್ಧಿ ಕಾರ್ಯ, ಶಂಕುಸ್ಥಾಪನೆ ಸ್ಥಗಿತಗೊಂಡಿದ್ದು ಇದನ್ನು ಶಾಸಕರು ಪ್ರಶ್ನಿಸಿದರೆ ಸರಕಾರದ ಬಳಿ ಸಮರ್ಪಕ ಉತ್ತರವಿಲ್ಲ. ಕುಮ್ಕಿ ಭೂಮಿಯಲ್ಲಿ ಕೃಷಿ ಮಾಡಿ ಮಾಲೀಕತ್ವಕ್ಕಾಗಿ ಕಾಯುತ್ತಿರುವ ಕೃಷಿಕರ ಕುರಿತು ನಿರ್ಲಕ್ಷ ತೋರಲಾಗುತ್ತಿದೆ. ದಕ ಜಿಲ್ಲೆಯ ಸಮಸ್ಯೆಗಳಿಗೆ ಸರಕಾರ ಉದಾಸೀನದ ಪ್ರವೃತ್ತಿ ಮುಂದುವರಿಸಿದೆ ಸದನದಲ್ಲಿ ತಾನು ಕೇಳಿದ 44 ಪ್ರಶ್ನೆಗಳಲ್ಲಿ ಕೇವಲ 13 ಪ್ರಶ್ನೆಗಳಿಗೆ ಮಾತ್ರ ಉತ್ತರ ನೀಡಲಾಗಿದೆ” ಎಂದು ದೂರಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಭಟನೆಯ ವೇಗದಲ್ಲಿ ಸಾಮಾನ್ಯ ಸದಸ್ಯರಂತೆ ವರ್ತಿಸಿದ್ದಾರೆ.ರಾಜಕೀಯ ಚರ್ಚೆಯನ್ನು ಅವರು ವೈಯಕ್ತಿಕ ನೆಲೆಗೆ ತಂದರು. ಸಾಮಾನ್ಯ ನಿಯಮಗಳನ್ನು ಪಾಲಿಸದೆ ಸಿ.ಟಿ. ರವಿ ಅವರನ್ನು ಬಂಧಿಸಿರುವುದು ಖಂಡನೀಯ.ಈ ಘಟನೆಯ ಒಟ್ಟು ಉದ್ದೇಶ ಪ್ರತಿಪಕ್ಷಗಳ ಧ್ವನಿಯನ್ನು ತಗ್ಗಿಸುವುದು ಆಗಿತ್ತು.ಆದರೆ ಪ್ರತಿ ಪಕ್ಷಗಳು ಇದಕ್ಕೆ ಬೆದರುವುದಿಲ್ಲ ಎಂದು ಹೇಳಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ
ಪ್ರಶಾಂತ ಪಾರೆಂಕಿ ಸ್ವಾಗತಿಸಿದರು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ.ಗ ಣೇಶ ಗೌಡ ಉಪಸ್ಥಿತರಿದ್ದರು.

Related posts

ನೂತನ ಉಪರಾಷ್ಟ್ರಪತಿಯಾಗಿ ಎ ನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!