24.6 C
ಪುತ್ತೂರು, ಬೆಳ್ತಂಗಡಿ
May 18, 2025
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಕಳೆದ 4, ವರ್ಷಗಳ ಹಿಂದೆ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿ ಇಂದು ಸುಮಾರು ಮೂರುವರೆ ಸಾವಿರ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಗುಣ ಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾದ ಎಕ್ಸೆಲ್ ಸತತವಾಗಿ ಅದ್ಬುತ ಫಲಿತಾಂಶಗಳನ್ನು ಸಾಧಿಸುತ್ತಿದೆ.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್ ಡಿ,ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಜೆಸಿಐ ವಲಯಾಧ್ಯಕ್ಷ ಗೀರೀಶ್ ಎಸ್.ಪಿ, ಉದ್ಯಮಿ ಪ್ರವೀಣ್ ಫರ್ನಾಂಡೀಸ್ ಹಳ್ಳಿಮನೆ,ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಜೆಎಸಿ ನಿರ್ದೇಶಕ ಕಿರಣ್ ಕುಮಾರ್ ಶೆಟ್ಟಿ, ವಲಯ ಉಪಾಧ್ಯಕ್ಷ ಶಂಕರ್ ರಾವ್, ಪೂರ್ವಾಧ್ಯಕ್ಷರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ಚಿದಾನಂದ ಇಡ್ಯ, ವಸಂತ ಶೆಟ್ಟಿ ಶ್ರದ್ದಾ,ರವೀಂದ್ರ ಶೆಟ್ಟಿ ಸುರಭಿ, ಸಭಾಶ್ಚಂದ್ರ ಎಂಪಿ,ಅಶೋಕ್ ಕುಮಾರ್ ಬಿಪಿ, ಜೆಸಿ ಸಪ್ತಾಹ ಸಂಯೋಜಕಿ ಹೇಮಾವತಿ, ಲೇಡಿ ಜೆಸಿ ಸಂಯೋಜಕಿ ಶೃತಿ ರಂಜಿತ್, ರಕ್ಷಿತ್ ಅಂಡಿಂಜೆ, ಶೈಲೇಶ್,ಪೂರ್ವಾಧ್ಯಕ್ಷರು ಜೆಸಿ ಪದಾಧಿಕಾರಿಗಳು, ಉಪಸ್ಥಿತರಿದ್ದರು.

Related posts

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya
error: Content is protected !!