24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!