25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya
error: Content is protected !!