25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ ಪ್ರಯುಕ್ತ ಹಸಿರುವಾಣಿ ಹೊರೆಕಾಣಿಕೆಯು ಡಿ.21 ರಂದು ಅರಸುಕಟ್ಟೆಯಿಂದ ಮೆರವಣಿಗೆ ಪ್ರಾರಂಭಗೊಂಡು ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ನಡೆಯಿತು.

ವಿಜೃಂಭಣೆಯಿಂದ ನೆರವೇರಿದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಯಲ್ಲಿ ಕೀಳುಕುದುರೆ, ಚೆಂಡೆ, ಸುಡುಮದ್ದು, ಆಕರ್ಷಣೆಯ ಗೊಂಬೆಗಳು, ಮುದ್ದು ಶಾರದೆ, ಬಂಗಾಳಿ ಟೈಗರ್, ಕೇರಳದ ಪ್ರಸಿದ್ದ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ನೋಡುಗರ ಗಮನ ಸೆಳೆಯಿತು. ಮೆರವಣಿಗೆಯಲ್ಲಿ ಸುಮಾರು ಐದು ಸಾವಿರ ಮಂದಿ ಭಕ್ತರು ಭಾಗಿಯಾದರು.

ಮೆರವಣಿಗೆಯ ಬಳಿಕ ವೀರ ಸಾವರ್ಕರ್ ವೇದಿಕೆಯಲ್ಲಿ ವಯೊಲಿನ್ ವಾದಕಿ ಅಧ್ಯಾ ವಿಜಯನ್ ರವರ ವಯೊಲಿನ್ ವಾದನ ಮತ್ತು ಚೆಂಡೆ ಪ್ರದರ್ಶನ ನಡೆಯಿತು.

Related posts

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬಂದಾರು ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya

ಆ.22: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!