26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್ ಬಳಿ ಡಿ.20 ರಂದು ಪ್ರತಿಭಟನೆ ನಡೆಯಿತು.

ಪ್ರತಿಭಟನಾಕರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ನಾಯಕರಾದ ನವಾಝ್ ಕಟ್ಟೆ, ಅಮಿತ್ ಶಾ ಅವರಿಗೆ ಗೃಹ ಸಚಿವರಾಗುವ ಅರ್ಹತೆ ಇಲ್ಲ.‌ ಇಂತಹ ವ್ಯಕ್ತಿಗೆ ಗೃಹ ಸಚಿವ ಸ್ಥಾನದಂತಹ ಉನ್ನತ ಹುದ್ದೆ ನೀಡಲಾಗಿದೆ. ಅಂಬೇಡ್ಕರ್ ಬಗ್ಗೆ ಬಿಜೆಪಿಗೆ ಇರುವ ಭಾವನೆ ಅಮಿತ್ ಶಾ ಮೂಲಕ ಹೊರಬಿದ್ದಿದೆ. ಅಮಿತ್ ಶಾ ಅವರನ್ನು ಗೃಹ ಸಚಿವ ಹುದ್ದೆ ಯಿಂದ ಕೆಳಗೆ ಇಳಿಸಬೇಕು ಎಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಕಣಿಯೂರು ಬ್ಲಾಕ್ ಸಮಿತಿ ಅಧ್ಯಕ್ಷ ಮುಸ್ತಾಫ ಬಂಗೇರಕಟ್ಟೆ, ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್, ಕ್ಷೇತ್ರ ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಮುಖಂಡರಾದ ಹನೀಫ್ ಪುಂಜಾಲಕಟ್ಟೆ, ನಝೀರ್ ಬಜಾರು, ಹನೀಫ್ ಟಿ.ಎಸ್, ರೌಫ್ ಪುಂಜಾಲಕಟ್ಟೆ, ಅಶ್ರಫ್ ಬದ್ಯಾರು, ಬ್ಲಾಕ್ ಪದಾಧಿಕಾರಿಗಳು, ಬ್ರಾಂಚ್ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya
error: Content is protected !!