22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ. 8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು.

ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರು ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ನ ವ್ಯವಸ್ಥೆಯನ್ನು ಮಾಡುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ವಹಿಸಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ,ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಸಿದ್ದ ಅಳದಂಗಡಿ ವೈದ್ಯರಾದ ಡಾ.ಎನ್.ಎಂ ತುಳಪುಳೆ, ಸ್ವಾತಿ ಡೆಂಟಲ್ ಕ್ಲಿನಕ್ ನ ಡಾ. ಶಶಿಧರ ಡೋಂಗ್ರೆ,ಪಿ.ಹೆಚ್ ನಿತ್ಯಾನಂದ ಶೆಟ್ಟಿ, ಯೋಜನಾಧಿಕಾರಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು.ದೇವೇಂದ್ರ ಹೆಗ್ಡೆ ಕೊಕ್ರಾಡಿ ಸ್ವಾಗತಿಸಿ,ಸದಾನಂದ ಪೂಜಾರಿ ಉಂಗೀಲಬೈಲು ವಂದಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಉಜಿರೆ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!