31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ.8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು.

ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರು ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ನ ವ್ಯವಸ್ಥೆಯನ್ನು ಮಾಡುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ವಹಿಸಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ,ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಸಿದ್ದ ಅಳದಂಗಡಿ ವೈದ್ಯರಾದ ಡಾ.ಎನ್.ಎಂ ತುಳಪುಳೆ, ಸ್ವಾತಿ ಡೆಂಟಲ್ ಕ್ಲಿನಕ್ ನ ಡಾ. ಶಶಿಧರ ಡೋಂಗ್ರೆ,ಪಿ.ಹೆಚ್ ನಿತ್ಯಾನಂದ ಶೆಟ್ಟಿ, ಯೋಜನಾಧಿಕಾರಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು.

ದೇವೇಂದ್ರ ಹೆಗ್ಡೆ ಕೊಕ್ರಾಡಿ ಸ್ವಾಗತಿಸಿ,ಸದಾನಂದ ಪೂಜಾರಿ ಉಂಗೀಲಬೈಲು ವಂದಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya
error: Content is protected !!