September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ. 8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು.

ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರು ಬ್ರಹ್ಮಕಲಶೋತ್ಸವದ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ನ ವ್ಯವಸ್ಥೆಯನ್ನು ಮಾಡುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ವಹಿಸಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ,ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಸಿದ್ದ ಅಳದಂಗಡಿ ವೈದ್ಯರಾದ ಡಾ.ಎನ್.ಎಂ ತುಳಪುಳೆ, ಸ್ವಾತಿ ಡೆಂಟಲ್ ಕ್ಲಿನಕ್ ನ ಡಾ. ಶಶಿಧರ ಡೋಂಗ್ರೆ,ಪಿ.ಹೆಚ್ ನಿತ್ಯಾನಂದ ಶೆಟ್ಟಿ, ಯೋಜನಾಧಿಕಾರಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು.ದೇವೇಂದ್ರ ಹೆಗ್ಡೆ ಕೊಕ್ರಾಡಿ ಸ್ವಾಗತಿಸಿ,ಸದಾನಂದ ಪೂಜಾರಿ ಉಂಗೀಲಬೈಲು ವಂದಿಸಿದರು.ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya
error: Content is protected !!